3:04 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Adichunchanagiri | ವಿಜ್ಞಾನ ಯಾವಾಗಲೂ ಧರ್ಮದ ಜತೆಗಿರಬೇಕು, ಅವಿವೇಕಿಗಳ ಕೈಗೆ ಸಿಗಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

20/02/2025, 21:17

ಮಂಡ್ಯ(reporterkarnataka.com): ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.


ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ್ ಅವರು ಪಾಲ್ಗೊಂಡರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್ಟಡವನ್ನು ಧ್ವಂಸ ಮಾಡಲಾಯಿತು ಎಂದರು.
ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಬ್ದುಲ್‌ ಕಲಾಂ ಅವರು ಇಡೀ ದೇಶದಲ್ಲಿ ವಿಜ್ಞಾನ-ತಂತ್ರಜ್ಞಾನವನ್ನು ಬೆಳೆಸಿದರು. ಪೊಲೀಸರ ಬಳಿ ಎಷ್ಟೇ ತಂತ್ರಜ್ಞಾನವಿದ್ದರೂ ಕಾಡುಗಳ್ಳ ವೀರಪ್ಪನ್‌ನನ್ನು ಹಲವಾರು ವರ್ಷಗಳ ಕಾಲ ಹಿಡಿಯಲು ಸಾಧ್ಯವಾಗಲಿಲ್ಲ. ವಿವೇಕಿಗಳ ಬಳಿ ವಿಜ್ಞಾನವಿದ್ದರೆ, ಅದು ಸದುಪಯೋಗವಾಗುತ್ತದೆ. ಅವಿವೇಕಿಗಳ ಬಳಿ ಇದ್ದರೆ ಹಾಳಾಗುತ್ತದೆ. ವಿಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕೆಂಬ ಕಾರಣಕ್ಕೆ ಮಠದಲ್ಲಿ ವಿಜ್ಞಾನ ಮೇಳ ಮಾಡಲಾಗುತ್ತಿದೆ ಎಂದರು.
ಮಹಾಕುಂಭ ಮೇಳದಲ್ಲಿ ಸುಮಾರು 40 ಕೋಟಿ ಜನರು ಸೇರಿದ್ದಾರೆ. ಆ ಕಾರ್ಯಕ್ರಮದ ಆಯೋಜಕರಲ್ಲಿ ಜುನಾ ಅಖಾಡದ ಶ್ರೀ ಅವಧೇಶನಾಂದ ಗಿರಿ ಮಹಾರಾಜ್‌ ಕೂಡ ಒಬ್ಬರು. ಇಂತಹ ಮಹಾ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಅವರಿಗೆ ನಾನು ವಂದಿಸಿದ್ದೇನೆ. ಅವರನ್ನು ನೋಡಿಯೇ ನನಗೆ ಪುಣ್ಯ ಬಂದಿದೆ ಎಂದರು.
ಮಹಾಕುಂಭಮೇಳಕ್ಕೆ ಹೋದರೆ ಪುಣ್ಯ ಬರುತ್ತದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈ ಮೂರು ದಿನದ ಸಂತೆಯಲ್ಲಿ ನಾವು ಪಾಪವನ್ನು ಕಳೆದು ಪುಣ್ಯ ಸಂಪಾದಿಸಬೇಕು. ನಾವು ಮಾಡುವ ಒಳ್ಳೆಯ ಕೆಲಸದಲ್ಲಿ ಸದಾ ದೇವರು ಇರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ನಾವು ಕೆಲಸ ಮಾಡಬೇಕು ಎಂದರು.
ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವರ್ಷದ ಪಟ್ಟಾಭಿಷೇಕವನ್ನು ಆಚರಿಸಲಾಗುತ್ತಿದೆ. ಈ ಹಿಂದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಮಠವನ್ನು ಮುನ್ನಡೆಸುತ್ತಿದ್ದರು. ಆಗ ನಾನು ಅವರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದೆ. ಅವರ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಠವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು