5:09 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Adichunchanagiri | ವಿಜ್ಞಾನ ಯಾವಾಗಲೂ ಧರ್ಮದ ಜತೆಗಿರಬೇಕು, ಅವಿವೇಕಿಗಳ ಕೈಗೆ ಸಿಗಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

20/02/2025, 21:17

ಮಂಡ್ಯ(reporterkarnataka.com): ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.


ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ್ ಅವರು ಪಾಲ್ಗೊಂಡರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್ಟಡವನ್ನು ಧ್ವಂಸ ಮಾಡಲಾಯಿತು ಎಂದರು.
ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಬ್ದುಲ್‌ ಕಲಾಂ ಅವರು ಇಡೀ ದೇಶದಲ್ಲಿ ವಿಜ್ಞಾನ-ತಂತ್ರಜ್ಞಾನವನ್ನು ಬೆಳೆಸಿದರು. ಪೊಲೀಸರ ಬಳಿ ಎಷ್ಟೇ ತಂತ್ರಜ್ಞಾನವಿದ್ದರೂ ಕಾಡುಗಳ್ಳ ವೀರಪ್ಪನ್‌ನನ್ನು ಹಲವಾರು ವರ್ಷಗಳ ಕಾಲ ಹಿಡಿಯಲು ಸಾಧ್ಯವಾಗಲಿಲ್ಲ. ವಿವೇಕಿಗಳ ಬಳಿ ವಿಜ್ಞಾನವಿದ್ದರೆ, ಅದು ಸದುಪಯೋಗವಾಗುತ್ತದೆ. ಅವಿವೇಕಿಗಳ ಬಳಿ ಇದ್ದರೆ ಹಾಳಾಗುತ್ತದೆ. ವಿಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕೆಂಬ ಕಾರಣಕ್ಕೆ ಮಠದಲ್ಲಿ ವಿಜ್ಞಾನ ಮೇಳ ಮಾಡಲಾಗುತ್ತಿದೆ ಎಂದರು.
ಮಹಾಕುಂಭ ಮೇಳದಲ್ಲಿ ಸುಮಾರು 40 ಕೋಟಿ ಜನರು ಸೇರಿದ್ದಾರೆ. ಆ ಕಾರ್ಯಕ್ರಮದ ಆಯೋಜಕರಲ್ಲಿ ಜುನಾ ಅಖಾಡದ ಶ್ರೀ ಅವಧೇಶನಾಂದ ಗಿರಿ ಮಹಾರಾಜ್‌ ಕೂಡ ಒಬ್ಬರು. ಇಂತಹ ಮಹಾ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಅವರಿಗೆ ನಾನು ವಂದಿಸಿದ್ದೇನೆ. ಅವರನ್ನು ನೋಡಿಯೇ ನನಗೆ ಪುಣ್ಯ ಬಂದಿದೆ ಎಂದರು.
ಮಹಾಕುಂಭಮೇಳಕ್ಕೆ ಹೋದರೆ ಪುಣ್ಯ ಬರುತ್ತದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈ ಮೂರು ದಿನದ ಸಂತೆಯಲ್ಲಿ ನಾವು ಪಾಪವನ್ನು ಕಳೆದು ಪುಣ್ಯ ಸಂಪಾದಿಸಬೇಕು. ನಾವು ಮಾಡುವ ಒಳ್ಳೆಯ ಕೆಲಸದಲ್ಲಿ ಸದಾ ದೇವರು ಇರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ನಾವು ಕೆಲಸ ಮಾಡಬೇಕು ಎಂದರು.
ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವರ್ಷದ ಪಟ್ಟಾಭಿಷೇಕವನ್ನು ಆಚರಿಸಲಾಗುತ್ತಿದೆ. ಈ ಹಿಂದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಮಠವನ್ನು ಮುನ್ನಡೆಸುತ್ತಿದ್ದರು. ಆಗ ನಾನು ಅವರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದೆ. ಅವರ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಠವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು