5:45 PM Friday20 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ…

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು