10:41 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು