6:58 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು