12:18 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಅಧಿಕಾರಸ್ಥರೇ ಇನ್ನಾದೂ ಕಣ್ಣು ಬಿಡಿ: ರಸ್ತೆ ಇಲ್ಲದ ಕಲ್ಕೋಡಿನಲ್ಲಿ ರೋಗಿಗಳನ್ನು ಸಾಗಿಸುವುದು ಜೋಳಿಗೆಯಲ್ಲಿ!!

12/07/2023, 20:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದ ಜನರ ಪಾಡು. ಯಾರಿಗಾದರೂ ಹುಷಾರಿಲ್ಲದಿದ್ದರೆ ರಸ್ತೆ ಸಂಪರ್ಕವಿಲ್ಲದ ಈ ಗ್ರಾಮದಿಂದ ಅನಾರೋಗ್ಯಪೀಡಿತರನ್ನು ಜೋಳಿಗೆಯಲ್ಲಿ ಕಟ್ಟಿ 1 ಕಿಮೀ. ದೂರದ ಕಳಸ ಪೇಟೆಗೆ ಕರೆದುಕೊಂಡು ಹೋಗಬೇಕು. ಇದೀಗ ಅನಾರೋಗ್ಯಪೀಡಿತ 70ರ ಹರೆಯದ ಶೇಷಮ್ಮ ಅವರನ್ನು ಜೋಳಿಗೆಯಲ್ಲಿ ಕಟ್ಟಿ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ ಯಶೋಗಾಥೆ ಇಲ್ಲಿದೆ.


ಕಳಸ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ 70 ವರ್ಷದ ಶೇಷಮ್ಮರನ್ನ ಜೋಳಿಗೆಯಲ್ಲಿ ಕುಟುಂಬಸ್ಥರು ಕಟ್ಟಿ ಸುಮಾರು 1 ಕಿಮೀ ಉದ್ದದ ದುರ್ಗಮ ಪ್ರದೇಶವನ್ನು ಕ್ರಮಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದ್ರೆ 4 ಕಿ.ಮೀ. ಆಗುತ್ತದೆ. ಕುದುರೆಮುಖ ಮೂಲಕ ಸುತ್ತಿಬರಲು 8 ಕಿ.ಮೀ. ಆಗುತ್ತದೆ. ಮುಕ್ಕಾಲು ಕಿ.ಮೀ. ಬಂದ್ರೆ ಆಟೋ ಸಿಗುತ್ತದೆ. ಆದ್ರೆ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡ್ತಿಲ್ಲ.
ರಸ್ತೆ ಇಲ್ಲದ ಕಾರಣ ರೋಗಿಯನ್ನ ಸುಮಾರು 1 ಕಿ.ಮೀ. ಜೋಳಿಗೆಯಲ್ಲಿ ತಂದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸುತ್ತಾರೆ. ಮುಕ್ಕಾಲು ಕಿ.ಮೀ. ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು, ಜನನಾಯಕರು ಯಾರೂ ಸ್ಪಂದಿಸಿಲ್ಲ. ಕಲ್ಕೋಡು ಗ್ರಾಮ 10 ಮನೆ, 30-40 ಜನಸಂಖ್ಯೆ ಇರುವ ಕಾಡಂಚಿನ ಕುಗ್ರಾಮವಾಗಿದೆ.
#KarnatakaGovt #karnatakatransportminister #karnatakapwdminister #KarnatakaHealthMinister #karnatakapwd #karnatakahealth #karnatakapwddepartment #chikkamagaluruadministration #chikkamagaluru

ಇತ್ತೀಚಿನ ಸುದ್ದಿ

ಜಾಹೀರಾತು