7:12 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಅದೊಂದು ಫೋನ್ ಕರೆ ಮಾಜಿ ಸಿಎಂ ಶೆಟ್ಟರ್ ಅವರನ್ನು ರಾಹುಲ್ ಜತೆ ನಿಂತು ಫೋಟೋ ಕ್ಲಿಕ್ಕಿಸುವಂತೆ ಮಾಡಿತು!!

23/04/2023, 22:48

ಅಶೋಕ್ ಕಲ್ಲಡ್ಕ ಮಂಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆಂದು ಮೊನ್ನೆ ಮೊನ್ನೆ ವರೆಗೂ ಯಾರಿಗೂ ಊಹಿಸಲು ಕೂಡ ಸಾಧ್ಯವಾಗಲಿಲ್ಲ. ಬಿಜೆಪಿಗರಿಗೆ ಬಿಡಿ, ಕಾಂಗ್ರೆಸಿಗರಿಗೂ ಇಂತಹದ್ದೊಂದು ಚಮತ್ಕಾರ ನಡೆಯುತ್ತದೆ ಎಂದು ಗೊತ್ತಿರಲಿಲ್ಲ. ಆದರೆ ಪವಾಡದ ರೀತಿಯಲ್ಲಿ ರಾಜ್ಯದಲ್ಲಿ ರಾಜಕೀಯ ವಿದ್ಯಮಾನ ನಡೆದು ಹೋಗಿದೆ.
ದಿಲ್ಲಿ ಬಿಜೆಪಿ ಹೈಕಮಾಂಡ್ ನಿಂದ ಬಂದ ಆ ಫೋನ್ ಕರೆ ಶೆಟ್ಟರ್ ಅವರ ರಾಜಕೀಯ ಬದುಕಿನ ದಿಕ್ಕನ್ನೇ ಬದಲಾಯಿಸಿ ಬಿಟ್ಟಿತು. ಹೈಕಮಾಂಡ್ ನಿಂದ ಬಂದ ಕರೆಯಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಬೇಕೆಂದು ತಿಳಿಸಲಾಯಿತು. ಇದು ಜಗದೀಶ್ ಶೆಟ್ಟರ್ ಅವರ ಹೃದಯದಲ್ಲಿ ಜ್ವಾಲಾಮುಖಿಯನ್ನೇ ಸೃಷ್ಟಿಸಿಬಿಟ್ಟಿತು. ಅದೇ ಜ್ವಾಲೆಯ ಕಿಡಿ ಶೆಟ್ಟರ್ ಅವರನ್ನು ತನ್ನ ರಾಜಕೀಯ ಜೀವನದುದ್ದಕ್ಕೂ ವಿರೋಧಿಸುತ್ತಲೇ ಬಂದ ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರ ಜತೆ ನಿಂತು ಫೋಟೋ ಕ್ಲಿಕ್ಕಿಸುವಂತೆ ಮಾಡಿಯೇ ಬಿಟ್ಟಿತು.
ಬಿಜೆಪಿ ಮತ್ತು ಕಾಂಗ್ರೆಸ್ ಉತ್ತರ ಮತ್ತು ದಕ್ಷಿಣ ಧ್ರುವಗಳಿದ್ದಂತೆ. ಒಂದು ಹಿಂದುತ್ವ ಎಂದು ಹೇಳಿದರೆ, ಇನ್ನೊಂದು ಸೆಕ್ಯುಲರ್ ಎನ್ನುತ್ತದೆ.
ಇಲ್ಲಿ ಧ್ರುವೀಕರಣ ಎಂದಿಗೂ ಅಸಾಧ್ಯ. ಅದೇ ರೀತಿ ಸುಮಾರು 40 ವರ್ಷಗಳಿಂದ ಬಿಜೆಪಿಯಲ್ಲಿದ್ದ ಶೆಟ್ಟರ್ ಅವರು ಕಟ್ಟರ್ ಆರೆಸ್ಸೆಸ್ಸಿಗ. ಮಿತ ಭಾಷಿಯಾದ ಶೆಟ್ಟರ್ ಅನಾವಶ್ಯಕವಾಗಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದವರಲ್ಲ. ಆದರೆ ತೀರಾ ಅಗತ್ಯ ಬಿದ್ದಾಗಲೆಲ್ಲ ಕಾಂಗ್ರೆಸ್ ಪಕ್ಷವನ್ನು ಹಿಗ್ಗಾಮುಗ್ಗಾ ಜಾಡಿಸುತ್ತಿದ್ದರು. ಕಾಂಗ್ರೆಸ್ ಐಸಿಯುನಲ್ಲಿದೆ ಎಂದು ಕೂಡ ಇತ್ತೀಚೆಗೆ ಲೇವಡಿ ಮಾಡಿದ್ದರು.

ಶೆಟ್ಟರ್ ಅವರಿಗೆ ತನ್ನ ಸ್ವಾಭಿಮಾನಕ್ಕೆ ಚ್ಯುತಿ ಬರುತ್ತದೆ ಎಂಬುದು ಗೊತ್ತಾದ ಕೂಡಲೇ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದಾರೆ. ಬಿಜೆಪಿ ಹೈಕಮಾಂಡಿನ ನಿಲುವನ್ನು ಧಿಕ್ಕರಿಸಿ ವಿರೋಧಿ ಪಾಳಯವನ್ನು ಸೇರಿಕೊಂಡಿದ್ದಾರೆ. ಹಾಗೆ ಬಾಗಲಕೋಟೆಯ ಕೂಡಲಸಂಗಮದಲ್ಲಿ ಭಾನುವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡ ಶೆಟ್ಟರ್ ಅವರು ರಾಹುಲ್ ಜತೆ ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಕೂಡ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು