9:51 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ

27/08/2022, 19:05

ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತು ಆರ್ ಎಸ್ ಎಸ್ –ಬಿಜೆಪಿ ವಿರುದ್ಧದ ಹೋರಾಟಕ್ಕಾಗಿ ಅಧಿಕಾರ ವಹಿಸಿಕೊಳ್ಳುವಂತೆ ಅವರ ಬಳಿ ವಿನಂತಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಬೆಂಬಲ ಹೊಂದಿರಬೇಕು. ಪಕ್ಷದಲ್ಲಿ ಸಂಪೂರ್ಣವಾದ ಮನ್ನಣೆ ಇರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು