11:53 PM Sunday4 - May 2025
ಬ್ರೇಕಿಂಗ್ ನ್ಯೂಸ್
Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಇತ್ತೀಚಿನ ಸುದ್ದಿ

‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

13/03/2025, 20:55

ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಧ್ವನಿಸುರುಳಿ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇಗುಲದ ಪ್ರಧಾನ ಅರ್ಚಕ ಸದಾಶಿವ ಭಟ್, ಆರ್‌ಎಸ್ಸೆಸ್ ಮುಖಂಡ ಪಿ.ಎಸ್.ಪ್ರಕಾಶ್, ವಾಗ್ಮಿ ಡಾ.ಅರುಣ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಜೀತ್ ಅಳ್ವ ಏತಮೊಗರು ಗುತ್ತು, ಶೋಧನ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.


ಬ್ರಿಜೇಶ್ ಕುಮಾರ್ ರೈ ಸಹ ನಿರ್ಮಾಪಕರಾಗಿದ್ದು, ಕಲಾ ಸಿಂಚನ ಮೊಹೀತ್ ಪೂಜಾರಿ ಅಡು ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡಿಗೆ ವಿದುಷಿ ಡಾ.ರೂಪಶ್ರೀ ಶ್ರವಣ್, ಆದ್ಯಾ ವಿ.ಸಾಲ್ಯಾನ್, ಶ್ರವಣ್ ಕುಮಾರ್ ಕೊಳಂಬೆ ಧ್ವನಿಯಾಗಿದ್ದಾರೆ. ಗಣೇಶ್ ಅದ್ಯಪಾಡಿ ಚಿತ್ರೀಕರಣ ಹಾಗೂ ಪ್ರಸಾದ್ ಆಚಾರ್ಯ ಕೊಳಂಬೆ ಸಂಕಲನ ಮಾಡಿದ್ದಾರೆ. ಹಾಡಿನ ರೆಕಾರ್ಡಿಂಗ್ ಸಪ್ತಕ್ ಸ್ಟುಡಿಯೋ (ಚಿದಾನಂದ ಕಡಬ)ದಲ್ಲಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು