4:44 PM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

13/03/2025, 20:55

ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಧ್ವನಿಸುರುಳಿ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇಗುಲದ ಪ್ರಧಾನ ಅರ್ಚಕ ಸದಾಶಿವ ಭಟ್, ಆರ್‌ಎಸ್ಸೆಸ್ ಮುಖಂಡ ಪಿ.ಎಸ್.ಪ್ರಕಾಶ್, ವಾಗ್ಮಿ ಡಾ.ಅರುಣ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಜೀತ್ ಅಳ್ವ ಏತಮೊಗರು ಗುತ್ತು, ಶೋಧನ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.


ಬ್ರಿಜೇಶ್ ಕುಮಾರ್ ರೈ ಸಹ ನಿರ್ಮಾಪಕರಾಗಿದ್ದು, ಕಲಾ ಸಿಂಚನ ಮೊಹೀತ್ ಪೂಜಾರಿ ಅಡು ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡಿಗೆ ವಿದುಷಿ ಡಾ.ರೂಪಶ್ರೀ ಶ್ರವಣ್, ಆದ್ಯಾ ವಿ.ಸಾಲ್ಯಾನ್, ಶ್ರವಣ್ ಕುಮಾರ್ ಕೊಳಂಬೆ ಧ್ವನಿಯಾಗಿದ್ದಾರೆ. ಗಣೇಶ್ ಅದ್ಯಪಾಡಿ ಚಿತ್ರೀಕರಣ ಹಾಗೂ ಪ್ರಸಾದ್ ಆಚಾರ್ಯ ಕೊಳಂಬೆ ಸಂಕಲನ ಮಾಡಿದ್ದಾರೆ. ಹಾಡಿನ ರೆಕಾರ್ಡಿಂಗ್ ಸಪ್ತಕ್ ಸ್ಟುಡಿಯೋ (ಚಿದಾನಂದ ಕಡಬ)ದಲ್ಲಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು