1:21 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

13/03/2025, 20:55

ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಧ್ವನಿಸುರುಳಿ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇಗುಲದ ಪ್ರಧಾನ ಅರ್ಚಕ ಸದಾಶಿವ ಭಟ್, ಆರ್‌ಎಸ್ಸೆಸ್ ಮುಖಂಡ ಪಿ.ಎಸ್.ಪ್ರಕಾಶ್, ವಾಗ್ಮಿ ಡಾ.ಅರುಣ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಜೀತ್ ಅಳ್ವ ಏತಮೊಗರು ಗುತ್ತು, ಶೋಧನ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.


ಬ್ರಿಜೇಶ್ ಕುಮಾರ್ ರೈ ಸಹ ನಿರ್ಮಾಪಕರಾಗಿದ್ದು, ಕಲಾ ಸಿಂಚನ ಮೊಹೀತ್ ಪೂಜಾರಿ ಅಡು ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡಿಗೆ ವಿದುಷಿ ಡಾ.ರೂಪಶ್ರೀ ಶ್ರವಣ್, ಆದ್ಯಾ ವಿ.ಸಾಲ್ಯಾನ್, ಶ್ರವಣ್ ಕುಮಾರ್ ಕೊಳಂಬೆ ಧ್ವನಿಯಾಗಿದ್ದಾರೆ. ಗಣೇಶ್ ಅದ್ಯಪಾಡಿ ಚಿತ್ರೀಕರಣ ಹಾಗೂ ಪ್ರಸಾದ್ ಆಚಾರ್ಯ ಕೊಳಂಬೆ ಸಂಕಲನ ಮಾಡಿದ್ದಾರೆ. ಹಾಡಿನ ರೆಕಾರ್ಡಿಂಗ್ ಸಪ್ತಕ್ ಸ್ಟುಡಿಯೋ (ಚಿದಾನಂದ ಕಡಬ)ದಲ್ಲಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು