11:38 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

13/03/2025, 20:55

ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಧ್ವನಿಸುರುಳಿ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇಗುಲದ ಪ್ರಧಾನ ಅರ್ಚಕ ಸದಾಶಿವ ಭಟ್, ಆರ್‌ಎಸ್ಸೆಸ್ ಮುಖಂಡ ಪಿ.ಎಸ್.ಪ್ರಕಾಶ್, ವಾಗ್ಮಿ ಡಾ.ಅರುಣ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಜೀತ್ ಅಳ್ವ ಏತಮೊಗರು ಗುತ್ತು, ಶೋಧನ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.


ಬ್ರಿಜೇಶ್ ಕುಮಾರ್ ರೈ ಸಹ ನಿರ್ಮಾಪಕರಾಗಿದ್ದು, ಕಲಾ ಸಿಂಚನ ಮೊಹೀತ್ ಪೂಜಾರಿ ಅಡು ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡಿಗೆ ವಿದುಷಿ ಡಾ.ರೂಪಶ್ರೀ ಶ್ರವಣ್, ಆದ್ಯಾ ವಿ.ಸಾಲ್ಯಾನ್, ಶ್ರವಣ್ ಕುಮಾರ್ ಕೊಳಂಬೆ ಧ್ವನಿಯಾಗಿದ್ದಾರೆ. ಗಣೇಶ್ ಅದ್ಯಪಾಡಿ ಚಿತ್ರೀಕರಣ ಹಾಗೂ ಪ್ರಸಾದ್ ಆಚಾರ್ಯ ಕೊಳಂಬೆ ಸಂಕಲನ ಮಾಡಿದ್ದಾರೆ. ಹಾಡಿನ ರೆಕಾರ್ಡಿಂಗ್ ಸಪ್ತಕ್ ಸ್ಟುಡಿಯೋ (ಚಿದಾನಂದ ಕಡಬ)ದಲ್ಲಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು