8:40 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಅಡ್ಯಾರ್‌: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡು ನುಂಗಿ 10 ತಿಂಗಳ ಹಸುಳೆ ದಾರುಣ ಸಾವು

17/06/2025, 13:08

ಮಂಗಳೂರು(reporterkarnataka.com): ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ವೆನ್ಲಾಕ್ ನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ನಗರದ ಹೊರವಲಯದ ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮಗು ಬೀಡಿ ತುಂಡು ನುಂಗಿತ್ತು. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
*ಪತಿಯ ನಿರ್ಲಕ್ಷ್ಯವೇ ಕಾರಣ:*
‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು