6:22 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಆಧ್ಯಾತ್ಮ ಚಿಂತನೆಗೆ ಉತ್ತಮ ಪುಸ್ತಕಗಳ ಓದುವುದು ಅಗತ್ಯ: ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ

11/03/2024, 20:04

ಬಂಟ್ವಾಳ(reporterkarnataka.com): ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದಬೇಕು. ಇದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು.
ಪೊಳಲಿಯ ಶ್ರೀ ರಾಮಕೃಷ್ಣ ತಪೋವನದ ಸಭಾಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಪ್ರತಿಷ್ಠಾನದ ಕಾರ್ಯ ಯೋಜನೆಗಳನ್ನು ಕಾರ್ಯಗತಗೊಳಿಸುವುದರೊಂದಿಗೆ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಲು ಸದಸ್ಯರ ಬೆಂಬಲವು ಅಗತ್ಯವೆಂದು ತಿಳಿಸಿದರು.
ಪಿ.ವೆಂಕಟೇಶ ನಾವುಡ ಮತ್ತು ಯಶವಂತ ಪೊಳಲಿ ಮಾತನಾಡಿ, ಪ್ರತಿಷ್ಠಾನದ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಪ್ರತಿಷ್ಠಾನದ ಉಪಾಧ್ಯಕ್ಷರಾದ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಉಜಿರೆ , ಗಣೇಶ್ ಭಟ್ ಕುತ್ರೊಟ್ಟು , ಸೀತಾರಾಮ ಶೆಟ್ಟಿ ,ಅನಾರು ಕೃಷ್ಣಶರ್ಮ, ರಾಜಮಣಿ ರಾಮಕುಂಜ, ಭಾರತಿ ರಾಮಕುಂಜ, ಕೆ .ಉದಯ ಶಂಕರ್ ರೈ ಪುಣಚ, ಕಸ್ತೂರಿ ಲೋಕೇಶ ಹೆಗ್ದೆ,ಚಂದ್ರಶೇಖರ ಆಳ್ವ ಪಡುಮಲೆ, ಕೆ.ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿದರು. ಉಪಾಧ್ಯಕ್ಷರಾದ ಲೋಕೇಶ್ ಹೆಗ್ಡೆ ಪುತ್ತೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು