6:46 AM Thursday24 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಆಧ್ಯಾತ್ಮ ಎನ್ನುವ ವಿಷಯ ನೀಡಿದರೆ ಮುಂದಿನ ವರ್ಷ ನಾರಾಯಣ ಗುರುಗಳ ಸ್ತಬ್ಧಚಿತ್ರ : ಸಚಿವ ವಿ.ಸುನೀಲ್ ಕುಮಾರ್

28/01/2022, 13:28

ಮಂಗಳೂರು(ReporterKarnataka.com) ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್‌ಗೆ ಆಧ್ಯಾತ್ಮ ಎಂಬ ವಿಷಯವನ್ನು ಕೊಟ್ಟರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಾಧ್ಯಮದ ಜತೆ ಮಾತನಾಡಿದ ಅವರು,
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರದ ಸಮಿತಿ ಅಮೃತಮಹೋತ್ಸವ ಎಂಬ ವಿಷಯದ ಸ್ತಬ್ದಚಿತ್ರ ಕಳುಹಿಸಲು ಹೇಳಿತ್ತು.

ಮುಂದಿನ ವರ್ಷ ಯಾವ ಆಯಾಮದಲ್ಲಿ ಸ್ತಬ್ಥಚಿತ್ರ ಕಳುಹಿಸಬೇಕು ಎಂಬುವುದನ್ನು ಕೇಂದ್ರ ಸರಕಾರದ ಸಮಿತಿ ತೀರ್ಮಾನಿಸುತ್ತದೆ. ಮುಂದಿನ ವರ್ಷ ಪ್ರವಾಸೋದ್ಯಮ, ಅರಣ್ಯ ಹೀಗೆ ವಿಷಯ ನೀಡಿದರೆ ಅದಕ್ಕೆ ತಕ್ಕುದಾದ ಸ್ತಬ್ಧಚಿತ್ರ ಕಳುಹಿಸುತ್ತೇವೆ. ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ನಾರಾಯಣ ಗುರು ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ಹೇಳಿದರು.

ಈ ಬಾರಿಯ ನಾರಾಯಣ ಗುರು ಟ್ಯಾಬ್ಲೋ ವಿಚಾರವನ್ನು ಕೇರಳ ಸರ್ಕಾರ ರಾಜಕೀಯಗೊಳಿಸಿದೆ. ನಾರಾಯಣ ಗುರುಗಳನ್ನು ಬಿಜೆಪಿ ರಾಜಕಾರಣಕ್ಕೆ ಈ ಹಿಂದೆಯೂ ಬಳಸಿಲ್ಲ.
ಮುಂದೆಯೂ ಬಳಸಲ್ಲ. ಕಾಂಗ್ರೆಸ್‌ ಇದನ್ನು ರಾಜಕೀಯಗೊಳಿಸಿರಬಹುದು. ಅವರ ಆದರ್ಶಗಳನ್ನು ಸರ್ಕಾರದ ಕಾರ್ಯಕ್ರಮಗಳಲ್ಲಿ ಬಳಸುತ್ತೇವೆ.

ಲೇಡಿಹಿಲ್‌ ಸರ್ಕಲ್‌ಗೆ ಶೀಘ್ರ ಕಾನೂನಾತ್ಮಕ ನಾಮಕರಣ
ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಹೆಸರಿಡಬೇಕು ಎನ್ನುವುದು ಬಿಜೆಪಿಯ ಮಹಾನಗರ ಪಾಲಿಕೆಯ ನಿರ್ಣಯ. ಅದು ನಮ್ಮ ಬದ್ಧತೆ. ಇದರಲ್ಲಿ ರಾಜಕಾರಣ ಇಲ್ಲ. ಕಾನೂನು ಬದ್ದವಾಗಿ ಆಗಬೇಕು ಎನ್ನುವುದು ಶಾಸಕ, ಕಾರ್ಪೋರೇಟರ್‌ಗಳ ಅಭಿಪ್ರಾಯ. ಇದು ಅಂತಿಮ ಹಂತದಲ್ಲಿದೆ. ಇದರ ಮೊದಲೇ ಬೋರ್ಡ್ ಹಾಕಿದರೆ ನಮ್ಮ ಆಕ್ಷೇಪ ಏನಿಲ್ಲ. ಅತ್ಯಂತ ಶೀಘ್ರವಾಗಿ ಅಧಿಕೃತವಾಗಿ ನಾಮಕರಣ ಮಾಡುತ್ತೇವೆ ಎಂದರು.

ಈ ವೇಳೆ ಶಾಸಕರದಾದ ವೇದವ್ಯಾಸ್‌ ಕಾಮತ್‌, ಉಮನಾಥ್‌ ಕೋಟ್ಯಾನ್‌, ಡಾ. ಭರತ್‌ ಶೆಟ್ಟಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು