2:17 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಅಸಾಧ್ಯ: ಸಾಹಿತಿ ತುರುವೇಕೆರೆ ಪ್ರಸಾದ್

03/09/2023, 12:22

ಮಂಗಳೂರು(reporterkarnataka.com): ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ. ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕೆಂದು ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ ಹೇಳಿದರು.
ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 14ನೇಯ ಆವೃತ್ತಿಯ 2023ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ” ಸ್ವೀಕರಿಸಿ, ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ದರಾಗಿ ಮಾಡುವಂತೆ ಕರೆ ನೀಡಿದರು.

ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅಭಿನಂದನ ಮಾತುಗಳಾನ್ನಡಿದರು. ಈ ಸಂದರ್ಭದಲ್ಲಿ “ಮೊಹಬ್ಬತ್ ಕಾ ದಾಗ “ಕಥಾಸಂಕಲನ ಬಿಡುಗಡೆಗೊಂಡಿತು. ವಿಶ್ರಾಂತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ. ಡಾ. ವಿಜಯಲಕ್ಷ್ಮಿ ನೇರಳಕೋಡಿ, ಶ್ರೀನಿಧಿ ಆರ್. ಎಸ್., ಮೌಶೀರ್ ಅಹಮದ್ ಸಾಮಣಿಗೆ, ಡಾ. ಮೀನಾಕ್ಷಿ ರಾಮಚಂದ್ರ, ಪೊ. ಡಾ. ಝೀಟಾ ಲೋಬೊ, ಲೇಖಕ ಎನ್. ವಿ. ಪೌಲೋಸ್, ಮಾರ್ಷಲ್ ಡಿಸೋಜ, ಕಲಾವಿದರಾದ ವಿಜಯಕುಮಾರ್ ಕೊಡಿಯಲ್ ಬೈಲ್, ರಾಜೇಂದ್ರ ಕೇದಿಗೆ ಮೊದಲಾದವರು ಉಪಸ್ಥಿತರಿದ್ದರು.
ಮಹೇಶ ಆರ್. ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವಚಿತ್ರ ಕಲಾವಿದೆ ಬೆಂಗಳೂರಿನ ಶಾರ್ವೀ ನಾೃಕ್ ಅವರನ್ನು ಅಭಿನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು