9:41 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು