8:48 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು