1:29 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು