2:44 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

Indo- Pak | ಪಾಕ್ ವಶದಲ್ಲಿದ್ದ ಭಾರತೀಯ ಯೋಧ ಪಿ.ಕೆ. ಶಾ ಬಿಡುಗಡೆ: 21 ದಿನಗಳ ಬಳಿಕ ಸ್ವದೇಶಕ್ಕೆ ವಾಪಾಸ್ !

14/05/2025, 20:56

ವಾಘಾ(reporterkarnataka.com): ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಕಿಸ್ತಾನದ ತನ್ನ ವಶದಲ್ಲಿರುವ ಬಿಎಸ್ ಎಫ್ ಗೆ ಸೇರಿದ ಭಾರತೀಯ ಯೋಧ ಪಿ.ಕೆ. ಶಾ ಅವರನ್ನು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ ಶಾ ಅವರನ್ನು ಇಂದು ಬೆಳಗ್ಗೆ 10.30ಕ್ಕೆ ಭಾರತಕ್ಕೆ ಹಸ್ತಾಂತರ ಮಾಡಲಾಯಿತು. 21 ದಿನಗಳ ಹಿಂದೆ ಪಂಜಾಬ್​ನ ಫಿರೋಜ್​ಪುರ ಗಡಿಯಲ್ಲಿ ಪಾಕಿಸ್ತಾನ, ಭಾರತೀಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಶಕ್ಕೆ ಪಡೆದಿತ್ತು. ಕಳೆದ ಏಪ್ರಿಲ್ 23ರಂದು ಭೂ ಸೇನೆಯ 182ನೇ ಬೆಟಾಲಿಯನ್‌ ಯೋಧ ಪಿ.ಕೆ. ಶಾ ಅವರು ಆಕಸ್ಮಿಕವಾಗಿ ಭಾರತದ ಗಡಿಯನ್ನು ದಾಟಿ, ಪಾಕಿಸ್ತಾನದ ಗಡಿ ರೇಖೆಯನ್ನು ಪ್ರವೇಶ ಮಾಡಿದ್ದರು. ಗಡಿ ದಾಟಿದ್ದ ತಪ್ಪಿಗೆ ಪಿ.ಕೆ. ಶಾ ಅವರನ್ನು ಪಾಕಿಸ್ತಾನದ ರೇಂಜರ್ಸ್ ಬಂಧಿಸಿದ್ದರು. ಭಾರತ- ಪಾಕ್ ಸಂಘರ್ಷ ನಡೆದು ಕದನ ವಿರಾಮದ ಬಳಿಕ ಪಾಕಿಸ್ತಾನ ಭಾರತದ ಷರತ್ತುಗಳಿಗೆ ಒಪ್ಪಿಕೊಂಡಿದೆ. ಹೀಗಾಗಿ ಅಟ್ಟಾರಿ ವಾಘಾ ಗಡಿ ಮೂಲಕ ಯೋಧ ಪಿ.ಕೆ. ಶಾ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ.
ಯೋಧ ಪಿ.ಕೆ. ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 21 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಪಿ.ಕೆ. ಶಾ ಅವರು ಸದ್ಯ ಸೇನಾ ಕಣ್ಗಾವಲಿನಲ್ಲಿದ್ದಾರೆ. ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಚಾರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು