12:02 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಗ್ರಹಾರ-ಹೊರಬೈಲು ರಸ್ತೆಯಲ್ಲಿ ಹೊಂಡ ಗುಂಡಿ: ವಾಹನ ಸವಾರರ ಪರದಾಟ; ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ

12/11/2024, 17:05

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣದಿಂದ ಕುರುವಳ್ಳಿ , ಅಗ್ರಹಾರ ಹೊರಬೈಲು ಸಂಪರ್ಕ ರಸ್ತೆಗಳು ಮರಳು ಸಾಗಾಣಿಕೆಯಿಂದ ಹೊಂಡ ಗುಂಡಿ ಬಿದ್ದು ಮೂರು ವರ್ಷಗಳಿಂದ ಹದಗೆಟ್ಟಿರುವ ಹಿನ್ನಲೆಯಲ್ಲಿ ರಸ್ತೆಯಲ್ಲಿ ಇತರ ವಾಹನಗಳು ಸಂಚರಿಸಲು ಪರದಾಡುತ್ತಿದ್ದು ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ.
ಬೊಮ್ಮಸಯ್ಯನ ಅಗ್ರಹಾರದಿಂದ ಹೊರಬೈಲಿನವರೆಗೆ ಹಲವೆಡೆ ಅಲ್ಲಲ್ಲಿ ದೊಡ್ಡದಾದ ಹೊಂಡ ಗುಂಡಿ ಬಿದ್ದಿವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಮೊದಲೇ ದುರಸ್ತಿ ಕಾಣದಿರುವ ರಸ್ತೆಯಲ್ಲಿ ವಾಹನ ಸವಾರರು ಸ್ವಲ್ಪ ವೇಗವಾಗಿ ತೆರಳಿದರೂ ಅಪಾಯ ಕಟ್ಟಿಟ್ಟಬುತ್ತಿ. ಈ ರಸ್ತೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿತ್ಯ ಓಡಾಡುತ್ತಾರೆ. ಹೊಂಡ ಗುಂಡಿ ಬಿದ್ದು ಸಮಸ್ಯೆಗಳಿದ್ದರೂ ಸ್ಪಂದಿಸುವ ಮನೋಭಾವ ಮಾತ್ರ ಅವರಿಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಈ ಭಾಗದ ಶಾಲಾ ಮಕ್ಕಳು, ಶಾಲೆಯ ವಾಹನಗಳು, ಪಾಲಕರು ಮಕ್ಕಳನ್ನು ಶಾಲೆಗೆ ಬಿಡಲು-ಕರೆದುಕೊಂಡು ಹೋಗಲು ದ್ವಿಚಕ್ರ ವಾಹನಗಳಲ್ಲಿ ಬರುತ್ತಾರೆ. ರಸ್ತೆಯಲ್ಲಿನ ಹೊಂಡ ಗುಂಡಿಯಿಂದಾಗಿ ಅಪಾಯಕಾರಿ ಸ್ಥಿತಿಯಲ್ಲಿ, ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ. ಈ ರಸ್ತೆ ದುಸ್ಥಿತಿಯ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳು ತಕ್ಷಣ ಗಮನ ಹರಿಸಬೇಕಿದೆ.
ಈ ರಸ್ತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಕ್ರಮವನ್ನು ಇದುವರೆಗೆ ಕೈಗೊಂಡಿಲ್ಲ. ಇದರಿಂದ ರೋಸಿ ಹೋದ ಗ್ರಾಮಸ್ಥರು ನಾಳೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ರಸ್ತೆ ತಡೆದು ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ.
ಸುಮಾರು 20 ವರ್ಷದ ಹಿಂದೆ ಗ್ರಾಮಕ್ಕೆ ಇಂತಹ ರಸ್ತೆ ಇತ್ತು. ತೀರ್ಥಹಳ್ಳಿ ಪಟ್ಟಣಕ್ಕೆ ಬರಲು ಮೂರು ಕೀಲೋ ಮೀಟರ್ ದೂರವನ್ನು ಕ್ರಮಿಸಲು ಅರ್ಧ ಗಂಟೆಗೂ ಅಧಿಕ ಸಮಯ ಬೇಕಾಗಿತ್ತು. ಅಂದು ದುರಸ್ತಿ ಮರೀಚಿಕೆಯಾಗಿತ್ತು. ಇಂದು ರಸ್ತೆ ಉತ್ತಮವಾಗಿ ಇದ್ದರು ಕೂಡ ಮೂರು ವರ್ಷಗಳಿಂದ ಈ ರಸ್ತೆಯಲ್ಲಿ ಮರುಳು ಲಾರಿ ಓಡಾಟದಿಂದ ಹೊಂಡ ಗುಂಡಿ ಬಿದ್ದು ಇಂತಹ ಸ್ಥಿತಿ ಬಂದೊದಗಿದೆ. ಪಟ್ಟಣಕ್ಕೆ ಬರಲು ಗಂಟೆಗೂ ಹೆಚ್ಚುಕಾಲ ಹಿಡಿಯುವ ಗತವೈಭವ ನೆನಪಿಸುತ್ತದೆ ಎಂದು ಬುಕ್ಲಾಪುರ ಸಾರ್ವಜನಿಕರು ಹೇಳುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು