11:53 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಆಗಸದಲ್ಲಿ ಚಂದ್ರನ ಹುಡುಕುತ್ತಿದ್ದವರಿಗೆ ಕಾಣಿಸಿದ್ದು ಬೆಂಕಿಯ ಜ್ವಾಲೆ!:  ಏನಿದು ಜಲ್ವಿಸುತ್ತಾ ಹಾದು ಹೋಗಿದ್ದು?.!!

03/04/2022, 12:17

ಮಂಗಳೂರು(reporterkarnataka.com) ದೇಶದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದರ ನಡುವೆ ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಬೆಂಕಿಯ ಜ್ವಾಲೆಯೊಂದು ಸುಮಾರು ಹೊತ್ತು ಆಕಾಶದಲ್ಲಿ ಸಾಗಿದೆ.ಇದನ್ನ ಕಂಡವರು ಧೂಮಕೇತು ಇರಬೇಕು, ಹಬ್ಬದ ದಿನ ಅನಿಷ್ಟ ಕಂಡಂತಾಯ್ತು ಎಂಬಂತೆ ಮಾತನಾಡಿಕೊಂಡಿದ್ದಾರೆ.

ಬಳಿಕ ಅದು ಉಲ್ಕಾಪಾತ ಎಂದು ಹೇಳುವಂತಹ ಮಾತುಗಳು ಆರಂಭವಾಗಿದೆ. ಆದರೆ ಉಲ್ಕಾಪಾತದ ಬಣ್ಣ ಈ ರೀತಿಯಲ್ಲಿ ಇರುವುದಿಲ್ಲ ಎಂಬ ವಾದಗಳಿವೆ.

ಮಹಾರಾಷ್ಟ್ರ ಮಧ್ಯಪ್ರದೇಶದ ಭಾಗಗಳಲ್ಲಿ ಈ ಬೆಂಕಿ ವಿಸ್ಮಯ ಕಂಡು ಬಂದಿದೆ. ವಿಶೇಷ ಅಂದರೆ ತೀರಾ ಹತ್ತಿರದಲ್ಲಿ ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಇನ್ನೂ ಖಗೋಳ ಶಾಸ್ತ್ರಜ್ಞರ ಪ್ರಕಾರ ಇದು ಉಲ್ಕಾಪಾತವಾಗಿರದೇ ಚೈನಾ 2021 ರಲ್ಲಿ ಆಕಾಶಕ್ಕೆ ಹಾರಿಬಿಟ್ಟ ರಾಕೆಟ್​ನ ಅವಶೇಷಗಳು ಆಗಿರಬಹುದು ಎನ್ನಲಾಗುತ್ತಿದೆ.

ಮತ್ತೆ ಕೆಲವರು ಯಾವುದೋ ರಾಷ್ಟ್ರದ ಸ್ಯಾಟಲೈಟ್ ಭೂಕ್ಷಕ್ಷೆಗೆ ಬಂದು, ಉರುಳುತ್ತಿರುವ ದೃಶ್ಯ ಇದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇದು ರಾಕೆಟ್ ಒಂದರ ಅವಶೇಷವಾಗಿದ್ದು, ಇದು ನೆಲಕ್ಕೆ ಬಿದ್ದು ಉಳಿದ ಪಾರ್ಟ್​ಗಳನ್ನ ಸ್ಥಳೀಯವಾಗಿ ನೋಡಿದವರು ಇದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು