6:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಆಗಸದಲ್ಲಿ ಚಂದ್ರನ ಹುಡುಕುತ್ತಿದ್ದವರಿಗೆ ಕಾಣಿಸಿದ್ದು ಬೆಂಕಿಯ ಜ್ವಾಲೆ!:  ಏನಿದು ಜಲ್ವಿಸುತ್ತಾ ಹಾದು ಹೋಗಿದ್ದು?.!!

03/04/2022, 12:17

ಮಂಗಳೂರು(reporterkarnataka.com) ದೇಶದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದರ ನಡುವೆ ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಬೆಂಕಿಯ ಜ್ವಾಲೆಯೊಂದು ಸುಮಾರು ಹೊತ್ತು ಆಕಾಶದಲ್ಲಿ ಸಾಗಿದೆ.ಇದನ್ನ ಕಂಡವರು ಧೂಮಕೇತು ಇರಬೇಕು, ಹಬ್ಬದ ದಿನ ಅನಿಷ್ಟ ಕಂಡಂತಾಯ್ತು ಎಂಬಂತೆ ಮಾತನಾಡಿಕೊಂಡಿದ್ದಾರೆ.

ಬಳಿಕ ಅದು ಉಲ್ಕಾಪಾತ ಎಂದು ಹೇಳುವಂತಹ ಮಾತುಗಳು ಆರಂಭವಾಗಿದೆ. ಆದರೆ ಉಲ್ಕಾಪಾತದ ಬಣ್ಣ ಈ ರೀತಿಯಲ್ಲಿ ಇರುವುದಿಲ್ಲ ಎಂಬ ವಾದಗಳಿವೆ.

ಮಹಾರಾಷ್ಟ್ರ ಮಧ್ಯಪ್ರದೇಶದ ಭಾಗಗಳಲ್ಲಿ ಈ ಬೆಂಕಿ ವಿಸ್ಮಯ ಕಂಡು ಬಂದಿದೆ. ವಿಶೇಷ ಅಂದರೆ ತೀರಾ ಹತ್ತಿರದಲ್ಲಿ ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಇನ್ನೂ ಖಗೋಳ ಶಾಸ್ತ್ರಜ್ಞರ ಪ್ರಕಾರ ಇದು ಉಲ್ಕಾಪಾತವಾಗಿರದೇ ಚೈನಾ 2021 ರಲ್ಲಿ ಆಕಾಶಕ್ಕೆ ಹಾರಿಬಿಟ್ಟ ರಾಕೆಟ್​ನ ಅವಶೇಷಗಳು ಆಗಿರಬಹುದು ಎನ್ನಲಾಗುತ್ತಿದೆ.

ಮತ್ತೆ ಕೆಲವರು ಯಾವುದೋ ರಾಷ್ಟ್ರದ ಸ್ಯಾಟಲೈಟ್ ಭೂಕ್ಷಕ್ಷೆಗೆ ಬಂದು, ಉರುಳುತ್ತಿರುವ ದೃಶ್ಯ ಇದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇದು ರಾಕೆಟ್ ಒಂದರ ಅವಶೇಷವಾಗಿದ್ದು, ಇದು ನೆಲಕ್ಕೆ ಬಿದ್ದು ಉಳಿದ ಪಾರ್ಟ್​ಗಳನ್ನ ಸ್ಥಳೀಯವಾಗಿ ನೋಡಿದವರು ಇದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು