12:46 AM Thursday25 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

03/10/2024, 10:11

ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ
ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ
ಸ್ವಚ್ಛತಾ ಅಭಿಯಾನ ನಡೆಸಿದರು.
ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ.
ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ.
ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮನಪಾ ಸದಸ್ಯರಾದ ಜಯಾನಂದ ಅಂಚನ್ , ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ.


ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣದೀಪ್ ಕಾಂಚನ್, ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷರಾದ ಹರಿಪ್ರಸಾದ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಶಕ್ತಿ ಕೇಂದ್ರದ ಸದಸ್ಯರಾದ ಸರೋಜಿನಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು