11:10 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

03/10/2024, 10:11

ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ
ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ
ಸ್ವಚ್ಛತಾ ಅಭಿಯಾನ ನಡೆಸಿದರು.
ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ.
ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ.
ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮನಪಾ ಸದಸ್ಯರಾದ ಜಯಾನಂದ ಅಂಚನ್ , ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ.


ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣದೀಪ್ ಕಾಂಚನ್, ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷರಾದ ಹರಿಪ್ರಸಾದ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಶಕ್ತಿ ಕೇಂದ್ರದ ಸದಸ್ಯರಾದ ಸರೋಜಿನಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು