1:06 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

03/10/2024, 10:11

ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ
ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ
ಸ್ವಚ್ಛತಾ ಅಭಿಯಾನ ನಡೆಸಿದರು.
ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ.
ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ.
ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮನಪಾ ಸದಸ್ಯರಾದ ಜಯಾನಂದ ಅಂಚನ್ , ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ.


ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣದೀಪ್ ಕಾಂಚನ್, ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷರಾದ ಹರಿಪ್ರಸಾದ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಶಕ್ತಿ ಕೇಂದ್ರದ ಸದಸ್ಯರಾದ ಸರೋಜಿನಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು