5:05 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

03/10/2024, 10:11

ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ
ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ
ಸ್ವಚ್ಛತಾ ಅಭಿಯಾನ ನಡೆಸಿದರು.
ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ.
ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ.
ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮನಪಾ ಸದಸ್ಯರಾದ ಜಯಾನಂದ ಅಂಚನ್ , ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ.


ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣದೀಪ್ ಕಾಂಚನ್, ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷರಾದ ಹರಿಪ್ರಸಾದ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಶಕ್ತಿ ಕೇಂದ್ರದ ಸದಸ್ಯರಾದ ಸರೋಜಿನಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು