10:37 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ

03/10/2024, 10:11

ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ
ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ
ಸ್ವಚ್ಛತಾ ಅಭಿಯಾನ ನಡೆಸಿದರು.
ಇದೇ ಸಂದರ್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ತಾವು ಅಧಿಕಾರ ಸ್ವೀಕರಿಸಿದ ಅವಧಿಯಿಂದ ದೇಶದಾದ್ಯಂತ ಹೊಸ ಕ್ರಾಂತಿಯಲ್ಲಿ ಮಾಡಿದ್ದಾರೆ.
ದೇಶದ ಮೂಲೆ ಮೂಲೆಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಕ್ತಿಯನ್ನು ತುಂಬಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಳೆದ 15 ದಿನಗಳಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಸಿಕೊಂಡಿದ್ದಾರೆ.
ಇಂದು ಉದಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಮನಪಾ ಸದಸ್ಯರಾದ ಜಯಾನಂದ ಅಂಚನ್ , ಬಿಜೆಪಿಯ ಪದಾಧಿಕಾರಿಗಳು ಎಲ್ಲರೂ ಸೇರಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ.


ದೇಶದ ಭದ್ರತಾ ಪಡೆಯನ್ನ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಅಗ್ನಿವೀರ ಪಡೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದು ಅವರ ಒಂದು ತಂಡ ನಮ್ಮೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಪ್ರಮುಖರಾದ ಪೂಜಾ ಪೈ, ರಣದೀಪ್ ಕಾಂಚನ್, ಶಾನ್ ವಾಝ್ ಹುಸೈನ್, ರಮೇಶ್, ಮಂಡಲದ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ ಹಾಗೂ ವಾರ್ಡಿನ ಅಧ್ಯಕ್ಷರಾದ ಹರಿಪ್ರಸಾದ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಶಕ್ತಿ ಕೇಂದ್ರದ ಸದಸ್ಯರಾದ ಸರೋಜಿನಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು