3:41 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ: ಮೆಟ್ರೋ ಮಾದರಿಯ ಸಂಚಾರಿ ವ್ಯವಸ್ಥೆ

12/04/2025, 14:55

*ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ*

*ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್ ಲಾಡ್*

*ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ವಿವರಿಸಿದ ಸಚಿವ ಸಂತೋಷ್ ಲಾಡ್*

ಬೆಂಗಳೂರು(reporterkarnataka.com): ಹುಬ್ಬಳ್ಳಿ- ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಇತರೆ ಮುಖ್ಯಾಂಶಗಳು:

•ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.

•ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

•ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.

•ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.

•ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.


•ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಇಎಸ್ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ, ಎಸ್ಎಸ್ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು