6:17 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ: ಮೆಟ್ರೋ ಮಾದರಿಯ ಸಂಚಾರಿ ವ್ಯವಸ್ಥೆ

12/04/2025, 14:55

*ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ*

*ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್ ಲಾಡ್*

*ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ವಿವರಿಸಿದ ಸಚಿವ ಸಂತೋಷ್ ಲಾಡ್*

ಬೆಂಗಳೂರು(reporterkarnataka.com): ಹುಬ್ಬಳ್ಳಿ- ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಇತರೆ ಮುಖ್ಯಾಂಶಗಳು:

•ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.

•ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

•ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.

•ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸ್ಥೆಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.

•ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.


•ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಇಎಸ್ಎಸ್ ಎಜಿ ಸಂಸ್ಥೆಯ ಸುಸಾನ್ ವಾನ್ ಸುರಿ, ಎಸ್ಎಸ್ಬಿ ಸಂಸ್ಥೆಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು