12:22 PM Tuesday7 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಆಗುಂಬೆ: ಮದ್ಯಪಾನ ಸೇವಿಸಿ ವಾಹನ ಚಲಾವಣೆ; ಚಾಲಕನಿಗೆ 10 ಸಾವಿರ ದಂಡ

28/08/2024, 19:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.
ಎಸ್ ಐ ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ
ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಇನ್ನೂ ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು