9:42 PM Friday20 - February 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ

ಇತ್ತೀಚಿನ ಸುದ್ದಿ

ಆಗುಂಬೆ: ಮದ್ಯಪಾನ ಸೇವಿಸಿ ವಾಹನ ಚಲಾವಣೆ; ಚಾಲಕನಿಗೆ 10 ಸಾವಿರ ದಂಡ

28/08/2024, 19:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.
ಎಸ್ ಐ ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ
ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಇನ್ನೂ ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು