6:22 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಆಗುಂಬೆ: ಮದ್ಯಪಾನ ಸೇವಿಸಿ ವಾಹನ ಚಲಾವಣೆ; ಚಾಲಕನಿಗೆ 10 ಸಾವಿರ ದಂಡ

28/08/2024, 19:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.
ಎಸ್ ಐ ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ
ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಇನ್ನೂ ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು