9:46 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಅಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆ ಪ್ರತ್ಯಕ್ಷ; ಬರ್ಕಣ ಜಲಪಾತ ಪ್ರವಾಸಿಗರಿಗೆ ಜಾಗ್ರತೆ ವಹಿಸಲು ಸೂಚನೆ

06/09/2022, 20:05

ಕಾರ್ಕಳ(reporterkarnataka.com): ಆಗುಂಬೆ ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಆನೆಯೊಂದು ಪ್ರತ್ಯಕ್ಷ ವಾಗಿದ್ದು  ಆಗುಂಬೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ಸಾಗುತ್ತಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಆತಂಕಕ್ಕೀಡಾದರು.

ಪ್ರತಿ  ವರ್ಷದ ಮಳೆಗಾಲದಲ್ಲಿ ಅನೆಯೊಂದು ಅಹಾರ ಅರಸಿಕೊಂಡು ಅಗುಂಬೆಯತ್ತ ಬರುತ್ತಿದ್ದು ಯಾವುದೇ ಹಾನಿಮಾಡದೆ  ಮಲ್ಲಂದೂರು ತಲ್ಲೂರು ನಾಕೂರು ಕಾಡಿನಲ್ಲಿ ಸಂಚರಿಸುತ್ತದೆ . ಮಳೆಗಾಲ‌ ಮುಗಿದ ಬಳಿಕ ಮತ್ತೆ ಕೆರೆಕಟ್ಟೆ ಮಾಳ ನಾರಾವಿಯತ್ತ ಸಾಗಿ ಹಿಂತಿರುಗುತ್ತದೆ. ಬರ್ಕಣ ಜೋಗಿಗುಂಡಿ ಜಲಪಾತ ವೀಕ್ಷಿಸಲು ಅಗಮಿಸುವ ಪ್ರವಾಸಿಗರು ಅರಣ್ಯಾಧಿಕಾರಿಗಳ ಮಾಹಿತಿ ಪಡೆದು ಸಾಗುವುದು ಒಳಿತು. 

ಅಗುಂಬೆ  ಹೆದ್ದಾರಿಯಲ್ಲಿ ಸಾಗುವ ಪ್ರವಾಸಿಗರು ಜಾಗೃತೆ ವಹಿಸಬೇಕು.ಪ್ರಾಣಿಗಳಿಗೆ ಹಾನಿಯಾಗಬಾರದು . ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ  ಆನೆಯ ಚಲನವಲನಗಳ ಮಾಹಿತಿ ನೀಡಿ ಜಲಪಾತ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ. ಮಲ್ಲಂದೂರು ಸಮೀಪದಲ್ಲಿ ಆನೆಯ ಚಲನವಲನಗಳಿದ್ದರೆ ಜಲಪಾತ ವೀಕ್ಷಣೆ ತಾತ್ಕಾಲಿಕ ಬಂದ್ ಮಾಡಲಾಗುತ್ತದೆ. ಅರಣ್ಯಾಧಿಕಾರಿ ಗಳು ,ಅರಣ್ಯ ವೀಕ್ಷಕರ ಸೂಚನೆಗಳನ್ನು ಪಾಲಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು