11:06 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆ ಪ್ರತ್ಯಕ್ಷ; ಬರ್ಕಣ ಜಲಪಾತ ಪ್ರವಾಸಿಗರಿಗೆ ಜಾಗ್ರತೆ ವಹಿಸಲು ಸೂಚನೆ

06/09/2022, 20:05

ಕಾರ್ಕಳ(reporterkarnataka.com): ಆಗುಂಬೆ ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಆನೆಯೊಂದು ಪ್ರತ್ಯಕ್ಷ ವಾಗಿದ್ದು  ಆಗುಂಬೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ಸಾಗುತ್ತಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಆತಂಕಕ್ಕೀಡಾದರು.

ಪ್ರತಿ  ವರ್ಷದ ಮಳೆಗಾಲದಲ್ಲಿ ಅನೆಯೊಂದು ಅಹಾರ ಅರಸಿಕೊಂಡು ಅಗುಂಬೆಯತ್ತ ಬರುತ್ತಿದ್ದು ಯಾವುದೇ ಹಾನಿಮಾಡದೆ  ಮಲ್ಲಂದೂರು ತಲ್ಲೂರು ನಾಕೂರು ಕಾಡಿನಲ್ಲಿ ಸಂಚರಿಸುತ್ತದೆ . ಮಳೆಗಾಲ‌ ಮುಗಿದ ಬಳಿಕ ಮತ್ತೆ ಕೆರೆಕಟ್ಟೆ ಮಾಳ ನಾರಾವಿಯತ್ತ ಸಾಗಿ ಹಿಂತಿರುಗುತ್ತದೆ. ಬರ್ಕಣ ಜೋಗಿಗುಂಡಿ ಜಲಪಾತ ವೀಕ್ಷಿಸಲು ಅಗಮಿಸುವ ಪ್ರವಾಸಿಗರು ಅರಣ್ಯಾಧಿಕಾರಿಗಳ ಮಾಹಿತಿ ಪಡೆದು ಸಾಗುವುದು ಒಳಿತು. 

ಅಗುಂಬೆ  ಹೆದ್ದಾರಿಯಲ್ಲಿ ಸಾಗುವ ಪ್ರವಾಸಿಗರು ಜಾಗೃತೆ ವಹಿಸಬೇಕು.ಪ್ರಾಣಿಗಳಿಗೆ ಹಾನಿಯಾಗಬಾರದು . ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ  ಆನೆಯ ಚಲನವಲನಗಳ ಮಾಹಿತಿ ನೀಡಿ ಜಲಪಾತ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ. ಮಲ್ಲಂದೂರು ಸಮೀಪದಲ್ಲಿ ಆನೆಯ ಚಲನವಲನಗಳಿದ್ದರೆ ಜಲಪಾತ ವೀಕ್ಷಣೆ ತಾತ್ಕಾಲಿಕ ಬಂದ್ ಮಾಡಲಾಗುತ್ತದೆ. ಅರಣ್ಯಾಧಿಕಾರಿ ಗಳು ,ಅರಣ್ಯ ವೀಕ್ಷಕರ ಸೂಚನೆಗಳನ್ನು ಪಾಲಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು