8:36 PM Saturday2 - August 2025
ಬ್ರೇಕಿಂಗ್ ನ್ಯೂಸ್
Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ…

ಇತ್ತೀಚಿನ ಸುದ್ದಿ

ಅಹಲ್ಯಾಬಾಯಿ ಹೋಳ್ಕರ್ ಅಖಂಡ ರಾಷ್ಟ್ರ ತಪಸ್ವಿನಿ: ಲೇಖಕಿ ಮೇಘಾ ಪ್ರಮೋದ್

01/06/2025, 15:18

ಬೆಂಗಳೂರು(reporterkarnataka.com): ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ರಾಷ್ಟ್ರದ ಅಖಂಡತೆಯನ್ನು ನಿರ್ಮಿಸುವುದರಲ್ಲಿ ಪಾತ್ರವಹಿಸಿದ ಅಖಂಡ ರಾಷ್ಟ್ರ ತಪಸ್ವಿನಿ ಎಂದು ಲೇಖಕಿ ಮೇಘಾ ಪ್ರಮೋದ್ ಹೇಳಿದರು.
ಬಸವನಗುಡಿಯ ಅಬಲಾಶ್ರಮದಲ್ಲಿ ನಡೆದ ಮಂಥನ ಶಂಕರಪುರ ವತಿಯಿಂದ ‘ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್’ ಪುಸ್ತಕದ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರದ ಸಾಂಸ್ಕೃತಿಕ ಮತ್ತು ಧಾರ್ಮಿಕ ಪುನರುತ್ಥಾನಕ್ಕಾಗಿ ಮಹತ್ವದ ಕೊಡುಗೆ ನೀಡಿದ ಅಹಲ್ಯಾಬಾಯಿ ಹೋಳ್ಕರ್ ಅವರ ಕುರಿತು ನಮ್ಮ ಪಠ್ಯಪುಸ್ತಕಗಳು ಕಡೆಗಣಿಸಿವೆ. ಆದರೆ ರಾಷ್ಟ್ರದ ಸರ್ವಾಂಗೀಣ ಉನ್ನತಿಗಾಗಿ ಹಲವು ಮಜಲುಗಳಲ್ಲಿ ಕೊಡುಗೆ ನೀಡಿದ ದಕ್ಷ ಆಡಳಿತಗಾರ್ತಿ, ರಾಜನೀತಿತಜ್ಞೆ, ಲೋಕಮಾತೆ, ಪುಣ್ಯಶ್ಲೋಕಿ ಅಹಲ್ಯಾಬಾಯಿ ಹೋಳ್ಕರ್ ಎಂದರು.


ಅಹಲ್ಯಾ ಬಾಯಿ ಹೋಳ್ಕರ್ ಅವರ ಆಡಳಿತದ ಅವಧಿಯಲ್ಲಿ ಬ್ರಿಟಿಷರಾದಿಯಾಗಿ, ನಾಡಿನೊಳಗಿನ ಅನೇಕ ಮತಾಂಧರೂ ತಮ್ಮ ರಾಜಕೀಯ ಅಸ್ತಿತ್ವವನ್ನು ಪಡೆಯುವುದಕ್ಕೆ ಪ್ರಯತ್ನಿಸುತ್ತಿದ್ದರು.‌ ಆದರೆ ಚಾಣಾಕ್ಷ ಅಹಲ್ಯಾ ಬಾಯಿ ಹೋಳ್ಕರ್ ಅವರಿಗೆ ಶತ್ರುಬೋಧೆ ಬಹಳ ಚೆನ್ನಾಗಿತ್ತು. ಟಿಪ್ಪುವನ್ನು ನಂಬಿಕೆಗೆ ಅನರ್ಹನಾದ ವ್ಯಕ್ತಿ ಎಂದೂ, ಬ್ರಿಟಿಷರ ಕುತಂತ್ರದ ಬಗ್ಗೆ ಎಚ್ಚರಿಕೆ ವಹಿಸಬೇಕೆಂದೂ ತಿಳಿಸಿದ್ದರು ಎಂದು ನುಡಿದರು.
ಅಂದಿನ ಕಾಲದಲ್ಲೇ ಮಹಿಳೆಯರ ಉತ್ಕೃಷ್ಟ ಜೀವನಕ್ಕಾಗಿ ಬಾಲ್ಯ ವಿವಾಹ ರದ್ಧತಿ, ಮಹಿಳಾ ಸೇನೆ ಮತ್ತು ಅದರಲ್ಲಿ ವಿಧವೆಯರ ಸಹಭಾಗಿತ್ವ, ಗುಡಿ ಕೈಗಾರಿಕೆಗಳಿಗೆ ಮಹತ್ವ, ಮಾಹೇಶ್ವರಿ ಸೀರೆಗಳ ತಯಾರಿಕೆ ಮುಂತಾದವುಗಳಿಗೆ ಪ್ರೋತ್ಸಾಹ ನೀಡಿದರು ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರದ ಉದ್ದಗಲಕ್ಕೂ ಅನೇಕ ತೀರ್ಥಕ್ಷೇತ್ರಗಳ ನಿರ್ಮಾಣ, ಪುನರುಜ್ಜೀವನ, ಗಂಗಾಜಲ ವಿತರಣೆ, ಸ್ವಾವಲಂಬಿ ಆರ್ಥಿಕತೆಗೆ ಒತ್ತು ನೀಡಿ ಎಲ್ಲಾ ಸೇವಾಕಾರ್ಯಗಳಿಗೆ ರಾಜ್ಯದ ಬೊಕ್ಕಸದ ಹಣವನ್ನು ಬಳಸದೆ ಸ್ವಂತದ್ದೇ ಹಣ ಬಳಸಿ ಅಹಲ್ಯಾಬಾಯಿ ಹೋಳ್ಕರ್ ಎಲ್ಲಾ ತಲೆಮಾರುಗಳಿಗೂ ಮಾದರಿಯಾಗಿದ್ದಾರೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು