8:11 PM Tuesday4 - August 2026
ಬ್ರೇಕಿಂಗ್ ನ್ಯೂಸ್
*ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157…

ಇತ್ತೀಚಿನ ಸುದ್ದಿ

*ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ: ಸಿಬ್ಬಂದಿ, ಪ್ರಯಾಣಿಕರು ಸೇರಿ 14 ಮಂದಿಗೆ ಗಾಯ*

04/08/2026, 20:10

ನವದೆಹಲಿ(reporterkarnataka.com): ಏರ್ ಇಂಡಿಯಾ ವಿಮಾನವೊಂದು ಆಗಸದಲ್ಲಿ ಬಿರುಗಾಳಿಗೆ ಸಿಲುಕಿ, 300 ಅಡಿ ಕೆಳಕ್ಕೆ ಕುಸಿದು ಪಲ್ಟಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ವಿಮಾನವು ಇದ್ದಕ್ಕಿದ್ದಂತೆ ಸುಮಾರು 300 ಅಡಿಗಳಷ್ಟು ಆಳಕ್ಕೆ ಕುಸಿದಿದೆ. ಒಳಗಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಸೀಟ್ ಬೆಲ್ಟ್ ಧರಿಸದಿದ್ದ ಪ್ರಯಾಣಿಕರು ಹಾಗೂ ಕರ್ತವ್ಯದಲ್ಲಿದ್ದ ವಿಮಾನದ ಸಿಬ್ಬಂದಿ ವಿಮಾನದ ಸೀಲಿಂಗ್​ಗೆ ಬಡಿದು ಗಾಯಗೊಂಡಿದ್ದಾರೆ.
ವಿಮಾನದಲ್ಲಿ ಉಂಟಾದ ಆತಂಕದ ನಡುವೆಯೂ ಏರ್ ಇಂಡಿಯಾ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಗಿದೆ. ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ತುರ್ತು ವೈದ್ಯಕೀಯ ತಂಡವು ಸ್ಥಳಕ್ಕೆ ಧಾವಿಸಿ, ಗಾಯಗೊಂಡವರಿಗೆ ತಕ್ಷಣದ ಪ್ರಥಮ ಚಿಕಿತ್ಸೆ ನೀಡಿದೆ. ತೀವ್ರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಮಾನದ ಒಳಗಿನ ಸೀಲಿಂಗ್ ಪ್ಯಾನೆಲ್‌ಗಳು ಜಖಂಗೊಂಡಿವೆ. ಮಾಹಿತಿಯ ಪ್ರಕಾರ, ಹಾರಾಟದ ಸಮಯದಲ್ಲಿ ವಿಮಾನವು ತಕ್ಷಣವೇ ಸುಮಾರು 300 ಅಡಿ ಕೆಳಕ್ಕೆ ಧುಮುಕಿದೆ ಎಂದು ಪೈಲಟ್ ತಿಳಿಸಿದ್ದಾರೆ. ಆಗಸದಲ್ಲೇ ವಿಮಾನ ಪಲ್ಟಿ ಹೊಡೆಯುತ್ತಾ ಕುಸಿದ ಕಾರಣದಿಂದ ಶೇ. 80ರಷ್ಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಒಟ್ಟು 14 ಜನರಿಗೆ ಹೆಚ್ಚಿನ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆ ವಿಮಾನದಲ್ಲಿನ ಪ್ರಯಾಣಿಕರು ಏರ್ ಇಂಡಿಯಾ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು