3:30 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು