10:07 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು