11:50 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು