8:22 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ನಲ್ಲಿ ಉದ್ಯೋಗದ ಭರವಸೆ: ವಂಡ್ಸೆಯ ಯುವತಿಗೆ 5 ಲಕ್ಷ ರೂ. ವಂಚನೆ

05/12/2021, 20:28

ಉಡುಪಿ(reporterkarnataka.com): ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕಳುಹಿಸಿದ ಜಿ-ಮೇಲ್ ಸಂದೇಶವನ್ನು ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕೈಕಾಣ ಎಂಬಲ್ಲಿ ನಡೆದಿದೆ.

ವಂಡ್ಸೆ ಗ್ರಾಮದ ಕೈಕಾಣ ನಿವಾಸಿ ಅನುಷಾ (21) ವಂಚನೆಗೊಳಗಾದ ಯುವತಿ. ಇವರಿಗೆ 2021 ನೇ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರು ಏರ್ ಪೋರ್ಟ್‌ನಲ್ಲಿ ಉದ್ಯೋಗ ನೀಡುವುದಾಗಿ  ಜಿ-ಮೇಲ್ ಸಂದೇಶವೊಂದು ಬಂದಿತ್ತು.

ಅದರಲಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದು, ಆಗ ಪರಿಚಿತ ವ್ಯಕ್ತಿ ಉದ್ಯೋಗದ ಕ್ಲಿಯರೆನ್ಸ್ ಮತ್ತು ಇತರೇ ಚಾರ್ಜ್‌ ಎಂದು ಹೇಳಿ ಅನುಷಾ ಅವರಿಂದ ಗೂಗಲ್ ಪೇ ಮೂಲಕ ₹65 ಸಾವಿರ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಆ ಬಳಿಕ ವಂಚಕರು ₹25 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂಬುದಾಗಿ ವಾಟ್ಸ್ ಅಪ್ ನಲ್ಲಿ ಅನುಷಾ ಅವರಿಗೆ ಸಂದೇಶವನ್ನು ಕಳುಹಿಸಿದ್ದು, ಅದನ್ನು ನಂಬಿದ ಅನುಷಾ ವಂಚಕರ ಬ್ಯಾಂಕ್ ಖಾತೆಗೆ ಮತ್ತೆ ₹ 5,01,540 ಹಣ ಪಾವತಿಸಿದ್ದಾರೆ.

ವಂಚಕರು ಉದ್ಯೋಗ ಭರವಸೆ ಹಾಗೂ ಬಹುಮಾನದ ಗೆದ್ದಿದ್ದೀರಿ ಎಂದು ನಂಬಿಸಿ ಅನುಷಾ ಅವರಿಂದ ಒಟ್ಟು ₹ 5,66,540 ದೋಚಿ ಮೋಸ ಮಾಡಿದ್ದಾರೆ. ಈ ಬಗ್ಗೆ ಅನುಷಾ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು