7:00 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ರನ್ ವೇಯಿಂದ ಹರಿದ ಮಳೆ ನೀರು ನೇರ ಬಡವರ ಮನೆಗೆ!!: ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

01/07/2024, 21:44

ಮಂಗಳೂರು(reporterkarnataka.com): ಮಂಗಳೂರು ಏರ್​​ಪೋರ್ಟ್ ಆಡಳಿತದ ವಿರುದ್ಧ ಸ್ಥಳೀಯರು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ವಿಮಾನ ನಿಲ್ದಾಣದ ರನ್​​ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳ ಮನೆಗೆ ನುಗ್ಗಿ ಕೃತಕ ನೆರೆಯ ಆವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಈ ಪ್ರತಿಭಟನೆ ನಡೆಸಿದ್ದಾರೆ.


ಸ್ಥಳೀಯರು ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಯಾವುದೇ ವಾಹನ ತೆರಳದಂತೆ ತಡೆಯೊಡ್ಡಿದರು. ವಿಷಯ ತಿಳಿಯುತ್ತಿದ್ದಂತೆ ಬಜಪೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ನಂತರ ಗ್ರಾಮಸ್ಥರ ಮನವೊಲಿಸಿದ ಪೊಲೀಸರು ರಸ್ತೆ ತೆರವುಗೊಳಿಸಿದರು.


ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗುವ ವಿಷಯದಲ್ಲಿ ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಏರ್ಪೋರ್ಟ್ ಸುತ್ತಮುತ್ತಲಿನ ಹಾಗೂ ಕೆಂಜಾರಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಂಗಳೂರು ಏರ್ ಪೋರ್ಟ್ ಟೇಬಲ್ ಟಾಪ್ ಏರ್ ಪೋರ್ಟ್ ಆಗಿರುವ ಕಾರಣ ಏರ್ ಪೋರ್ಟ್ ಆಡಳಿತ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದರಿಂದ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು