5:13 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ರನ್ ವೇಯಿಂದ ಹರಿದ ಮಳೆ ನೀರು ನೇರ ಬಡವರ ಮನೆಗೆ!!: ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

01/07/2024, 21:44

ಮಂಗಳೂರು(reporterkarnataka.com): ಮಂಗಳೂರು ಏರ್​​ಪೋರ್ಟ್ ಆಡಳಿತದ ವಿರುದ್ಧ ಸ್ಥಳೀಯರು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ವಿಮಾನ ನಿಲ್ದಾಣದ ರನ್​​ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳ ಮನೆಗೆ ನುಗ್ಗಿ ಕೃತಕ ನೆರೆಯ ಆವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಈ ಪ್ರತಿಭಟನೆ ನಡೆಸಿದ್ದಾರೆ.


ಸ್ಥಳೀಯರು ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಯಾವುದೇ ವಾಹನ ತೆರಳದಂತೆ ತಡೆಯೊಡ್ಡಿದರು. ವಿಷಯ ತಿಳಿಯುತ್ತಿದ್ದಂತೆ ಬಜಪೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ನಂತರ ಗ್ರಾಮಸ್ಥರ ಮನವೊಲಿಸಿದ ಪೊಲೀಸರು ರಸ್ತೆ ತೆರವುಗೊಳಿಸಿದರು.


ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗುವ ವಿಷಯದಲ್ಲಿ ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಏರ್ಪೋರ್ಟ್ ಸುತ್ತಮುತ್ತಲಿನ ಹಾಗೂ ಕೆಂಜಾರಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಂಗಳೂರು ಏರ್ ಪೋರ್ಟ್ ಟೇಬಲ್ ಟಾಪ್ ಏರ್ ಪೋರ್ಟ್ ಆಗಿರುವ ಕಾರಣ ಏರ್ ಪೋರ್ಟ್ ಆಡಳಿತ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದರಿಂದ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು