5:05 AM Tuesday16 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಏರ್ಪೋರ್ಟ್‌ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ

27/08/2021, 17:23

ಮಂಗಳೂರು(reporterkarnataka.com)

ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ಪಾರ್ಕಿಂಗ್ ಸ್ಥಳದಲ್ಲಿ ಹಳದಿ ಲೋಹದ ಬಳೆಯನ್ನು ಕಂಡಿತು. ಪ್ರಾಮಾಣಿಕತೆಯೆನ್ನು ಮೆರೆದ ಅವರು ಚಿನ್ನದ ಬಳೆಯನ್ನು ಲಾಸ್ಟ್ & ಫೌಂಡ್ ಚೇಂಬರ್‌ಗೆ ನೀಡಿದ್ದಾರೆ.


ಶ್ರೀ ಪೂಜಾರಿ ಅವರ ಪ್ರಾಮಾಣಿಕತೆ ಮತ್ತು ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ ಎಂದು ಮಂಗಳೂರು ಏರ್ಪೋರ್ಟ್ ಟ್ವಿಟರ್ ಖಾತೆಯಲ್ಲಿ #gatewaystogoodness ಎನ್ನುವ ಟ್ಯಾಗ್ ಲೈನ್ ಜತೆ ಹಂಚಿಕೊಂಡಿದೆ.

ಡೊಂಬಯ್ಯ ಪೂಜಾರಿಯವರು ಮಂಗಳೂರು ತಾಲೂಕಿನ ಅದ್ಯಪಾಡಿ ಪದವಿನ ನಿವಾಯಿಸಿಯಾಗಿದ್ದು, ಹಲವು ವರ್ಷಗಳಿಂದ ಏರ್ಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು