9:37 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಐಶ್ವರ್ಯವಿದ್ದರೆ ಸಾಲದು ಅದರ ಸದ್ಬಳಕೆಯಾಗಬೇಕು, ಜನಸೇವೆ ಜನ ಮಾನಸದಲ್ಲಿ ಉಳಿಯಬೇಕು: ರಾಜೇಶ್ ಶೆಣೈ

12/11/2021, 07:50

ಕಾರ್ಕಳ(reporterkarnataka.com): ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸು ಮನುಷ್ಯನಿಗೆ ಇರಬೇಕೇ ಹೊರತು ಆತನಲ್ಲಿ ಐಶ್ವರ್ಯ ಮಾತ್ರ ಇದ್ದರೇ ಪ್ರಯೋಜನ ಇಲ್ಲ. ಅದರ ಸದ್ಬಳಕೆ ಆಗಬೇಕು. ಆಗ ಮಾತ್ರ ಆ ಐಶ್ವರ್ಯಕ್ಕೆ ಬೆಲೆ ಬರುತ್ತದೆ. ನಾವು ಮಾಡುವ ಸಮಾಜ ಸೇವೆ ಸಮಾಜ ಮುಖಿಯಾಗಿ ಜನ ಮಾನಸದಲ್ಲಿ ಉಳಿಯಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶೆಣೈ ಹೇಳಿದರು.

ಇವರು ಕಾರ್ಕಳದ ಎಸ್ ವಿ ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಇಲ್ಲಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕನ್ನಡ ಡಿಂಡಿಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದ ಆಗುಹೋಗುಗಳ ಬಗ್ಗೆ ನಾವು ಸ್ಪಂದಿಸುವ ಗುಣಗಳನ್ನು ನಾವು ಹೊಂದಬೇಕು .ಬೇರೆಯವರ ಸಮಸ್ಯೆಗಳನ್ನು ಬಗೆಹರಿಸಲು ನಾವು ಪ್ರಯತ್ನಿಸುವುದರಲ್ಲಿ ನಮ್ಮ ಸಂತೋಷ ಕಾಣುವಂತಾಗಬೇಕು ಆಗ ಖಂಡಿತವಾಗಿಯೂ ನಮ್ಮ ಜೇವನ ಸಾರ್ಥಕವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಲಯನ್ಸ್  ಮಿಥುನ್ ಹೆಗ್ಡೆ ಅವರು, ಕಳೆದ 4 ತಿಂಗಳಲ್ಲಿ  ಅಧ್ಯಕ್ಷ ರಾಜೇಶ್ ಶೆಣೈ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಕಾರ್ಕಳ ಘಟಕವು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕನ್ನಡ ನಾಡು ನುಡಿ ಜೊತೆಗೆ ಸಮಾಜದ ಬಡಜನತೆ ,ವಿದ್ಯಾರ್ಥಿಗಳು ಹಾಗೂ ಶ್ರಮಿಕ ವರ್ಗದ ಜನರಿಗೆ ಯಾವುದೇ ಪ್ರತಫಲಾಪೇಕ್ಷೆ ಇಲ್ಲದ  ನಿರಂತರ ಒಂದಲ್ಲ ಒಂದು ಸಹಾಯವನ್ನು ನೀಡುತ್ತಿರುವ ರಾಜೇಶ್ ಶೆಣೈ ನಿಜವಾಗಿಯೂ ಅಭಿನಂದನಾರ್ಹರು ಎಂದರು

ಈ ಸಂಧರ್ಭದಲ್ಲಿ ಎಸ್ ವಿ ಟಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜೇಶ್ ಶೆಣೈ ಯವರು ಲಯನ್ಸ್ ಕ್ಲಬ್ ಮುಖಾಂತರ ಕಂಪ್ಯೂಟರ್, ಪ್ರಿಂಟರ್, ಯೂಪಿಎಸ್ ಹಾಗೂ ಸುಮಾರು 300 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ವೇದಿಕೆಯಲ್ಲಿ ಎಸ್‌ ವಿ ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಂಡಳಿ ಕಾರ್ಯದರ್ಶಿ ಕೆ ಪಿ ಶೆಣೈ, ಟ್ರಸ್ಟಿ ರವೀಂದ್ರ ಪೈ  ಲಯನ್ಸ್ ವಲಯಾಧ್ಯಕ್ಷ ಸುಭಾಸ್ ಸುವರ್ಣ,ಕೋಶಾಧಿಕಾರಿ ಪ್ರಕಾಶ್ ಪಿಂಟೋ ಡಾ.ರಾಬರ್ಟ್ ಡಿಮೆಲ್ಲೊ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು