5:53 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು