2:04 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ

28/01/2023, 12:09

ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗೆ ಜರುಗಿತು.

ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಸಂಘಟನೆಗಾಗಿ ಸೇವೆ ಸಲ್ಲಿಸಿದ
ಕಬಕ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ಅವರಿಗೆ ರಾಜ್ಯ ಮಟ್ಟದ ಆದಿ ಗ್ರಾಮೋತ್ಸವ ಯುವಸಿರಿ ಗೌರವ 2022 ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮ್ಮೇಳನದ ಅಧ್ಯಕ್ಷತೆ ಯನ್ನು ಕವಯಿತ್ರಿ ರೇಷ್ಮಾ ಶೆಟ್ಟಿ ಗೊರೂರು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಕರ್ತ, ಸಂಘಟಕ ಡಾ.ಶೇಖರ್ ಅಜೆಕಾರು,ಯಕ್ಷಪೋಷಕ ವಿಜಯ್ ಶೆಟ್ಟಿ,ಅರುಣ್ ಶೆಟ್ಟಿಗಾರ್, ಬಾಲಪ್ರತಿಭೆ ಸುನಿಧಿ ಅಜೆಕಾರು, ಸಾಹಿತಿ ಜಯಾನಂದ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು