9:29 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಅಜೆಕಾರಿನಲ್ಲಿ ಫೆಬ್ರವರಿ 25ರಂದು ಬೃಹತ್ ಹೃದಯ ತಪಾಸಣಾ ಶಿಬಿರ

23/02/2024, 13:19

ಕಾರ್ಕಳ(reporterkarnataka.com): ಕೊರೊನಾ ಕಾಲಘಟ್ಟದ ಬಳಿಕ ದೇಶದಲ್ಲಿ ಹೃದಯಘಾತಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರ ಏರುಗತಿಯಲ್ಲಿ ಸಾಗುತ್ತಿದ್ದು, ನಗರಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆಗಳು ಇವೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹೃದಯಕ್ಕೆ  ಸ್ಥಳೀಯ ಸಂಘ ಸಂಸ್ಥೆಗಳು  ಸೇರಿದಂತೆ ಈ  ಬೃಹತ್ ಹೃದಯ ತಪಾಸಣಾ ಶಿಬಿರಕ್ಕೆ ಕೈಜೋಡಿಸಿವೆ.
ಅಜೆಕಾರು ಶ್ರೀ ರಾಮ ಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಅವರ ತಂಡದಿಂದ ನೇತೃತ್ವದಲ್ಲಿ ಫೆ.25ರಂದು ಅಜೆಕಾರು ರಾಮ ಮಂದಿರದಲ್ಲಿ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರವು ಬೆ.8ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನ , ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರು ಪ್ರಯೋಜನ ಪಡೆಯಬಹುದಾಗಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೃದ್ರೋಗ ತಪಾಸಣಾ  ಶಿಬಿರಗಳನ್ನು ಆಯೋಜಿಸಿ   ಯಶಸ್ವಿ ಯಾಗಿರುವ ಮಂಗಳೂರಿನ ಡಾ. ಪದ್ಮನಾಭ ಕಾಮತ್ ತಂಡವೇ ನೇತೃತ್ವ ವಹಿಸಿದೆ.
ಸಾಮಾನ್ಯ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರು, ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್ ಹಾರ್ಡ್ ರಿಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದರು,ಹೃದಯ ತೊಂದರೆ ಸಂಬಂಧಿತ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಫೆ.19ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ನಿಗದಿಪಡಿಸಿದ ಸೋಮವಾರದಿಂದ ಗ್ರಾಮ‌ ವ್ಯಾಪ್ತಿಗಳ ಎಲ್ಲಾ ಇಸಿಜಿ ಕೇಂದ್ರ ಗಳಲ್ಲಿ ಪೂರ್ವದಲ್ಲಿ ರಿಜಿಸ್ಟ್ರಾರ್ ಮಾಡಬಹುದು. ಇದರಿಂದಾಗಿ ಸಲಹೆ ಸೂಚನೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ. ಅಜೆಕಾರು ವ್ಯಾಪ್ತಿಯಲ್ಲಿ 4 ಇಸಿಜಿ ಕೇಂದ್ರಗಳಿದ್ದು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ.
ಪ್ರತಿಯೊಂದು ಗ್ರಾಮೀಣ ಅರೋಗ್ಯ ಶಿಬಿರವು ತನ್ನದೇ ಆದ ಒಂದು ವೈಶಿಷ್ಟ್ಯತೆ ಹೊಂದಿದೆ.
ನಾನು ಮಾಡುವ ಪ್ರಯತ್ನ ಕೇವಲ ವೈದ್ಯನಾಗಿ ಅಲ್ಲಾ . ಪ್ರತಿಯೊಂದು ಶಿಬಿರ ದಲ್ಲಿ ನಾನು ಸ್ವಯಂಸೇವಕನಾಗಿ ದುಡಿದಿದ್ದೇನೆ. ಆರೋಗ್ಯವೇ ನಮ್ಮ ಆಸ್ತಿಯಾಗಿದೆ. ನಾವೆಲ್ಲರೂ ಜಾತಿ ಮತ ಧರ್ಮ ತೊರೆದು ಈ ಶಿಬಿರದಲ್ಲಿ ಭಾಗವಹಿಸೋಣ.

ಇತ್ತೀಚಿನ ಸುದ್ದಿ

ಜಾಹೀರಾತು