8:57 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅಜೆಕಾರಿನಲ್ಲಿ ಫೆಬ್ರವರಿ 25ರಂದು ಬೃಹತ್ ಹೃದಯ ತಪಾಸಣಾ ಶಿಬಿರ

23/02/2024, 13:19

ಕಾರ್ಕಳ(reporterkarnataka.com): ಕೊರೊನಾ ಕಾಲಘಟ್ಟದ ಬಳಿಕ ದೇಶದಲ್ಲಿ ಹೃದಯಘಾತಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರ ಏರುಗತಿಯಲ್ಲಿ ಸಾಗುತ್ತಿದ್ದು, ನಗರಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆಗಳು ಇವೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹೃದಯಕ್ಕೆ  ಸ್ಥಳೀಯ ಸಂಘ ಸಂಸ್ಥೆಗಳು  ಸೇರಿದಂತೆ ಈ  ಬೃಹತ್ ಹೃದಯ ತಪಾಸಣಾ ಶಿಬಿರಕ್ಕೆ ಕೈಜೋಡಿಸಿವೆ.
ಅಜೆಕಾರು ಶ್ರೀ ರಾಮ ಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಅವರ ತಂಡದಿಂದ ನೇತೃತ್ವದಲ್ಲಿ ಫೆ.25ರಂದು ಅಜೆಕಾರು ರಾಮ ಮಂದಿರದಲ್ಲಿ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರವು ಬೆ.8ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನ , ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರು ಪ್ರಯೋಜನ ಪಡೆಯಬಹುದಾಗಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೃದ್ರೋಗ ತಪಾಸಣಾ  ಶಿಬಿರಗಳನ್ನು ಆಯೋಜಿಸಿ   ಯಶಸ್ವಿ ಯಾಗಿರುವ ಮಂಗಳೂರಿನ ಡಾ. ಪದ್ಮನಾಭ ಕಾಮತ್ ತಂಡವೇ ನೇತೃತ್ವ ವಹಿಸಿದೆ.
ಸಾಮಾನ್ಯ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರು, ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್ ಹಾರ್ಡ್ ರಿಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದರು,ಹೃದಯ ತೊಂದರೆ ಸಂಬಂಧಿತ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಫೆ.19ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ನಿಗದಿಪಡಿಸಿದ ಸೋಮವಾರದಿಂದ ಗ್ರಾಮ‌ ವ್ಯಾಪ್ತಿಗಳ ಎಲ್ಲಾ ಇಸಿಜಿ ಕೇಂದ್ರ ಗಳಲ್ಲಿ ಪೂರ್ವದಲ್ಲಿ ರಿಜಿಸ್ಟ್ರಾರ್ ಮಾಡಬಹುದು. ಇದರಿಂದಾಗಿ ಸಲಹೆ ಸೂಚನೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ. ಅಜೆಕಾರು ವ್ಯಾಪ್ತಿಯಲ್ಲಿ 4 ಇಸಿಜಿ ಕೇಂದ್ರಗಳಿದ್ದು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ.
ಪ್ರತಿಯೊಂದು ಗ್ರಾಮೀಣ ಅರೋಗ್ಯ ಶಿಬಿರವು ತನ್ನದೇ ಆದ ಒಂದು ವೈಶಿಷ್ಟ್ಯತೆ ಹೊಂದಿದೆ.
ನಾನು ಮಾಡುವ ಪ್ರಯತ್ನ ಕೇವಲ ವೈದ್ಯನಾಗಿ ಅಲ್ಲಾ . ಪ್ರತಿಯೊಂದು ಶಿಬಿರ ದಲ್ಲಿ ನಾನು ಸ್ವಯಂಸೇವಕನಾಗಿ ದುಡಿದಿದ್ದೇನೆ. ಆರೋಗ್ಯವೇ ನಮ್ಮ ಆಸ್ತಿಯಾಗಿದೆ. ನಾವೆಲ್ಲರೂ ಜಾತಿ ಮತ ಧರ್ಮ ತೊರೆದು ಈ ಶಿಬಿರದಲ್ಲಿ ಭಾಗವಹಿಸೋಣ.

ಇತ್ತೀಚಿನ ಸುದ್ದಿ

ಜಾಹೀರಾತು