8:41 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು